Showing posts with label Bassaru - Palya /ಬಸ್ಸಾರು ಪಲ್ಯ. Show all posts
Showing posts with label Bassaru - Palya /ಬಸ್ಸಾರು ಪಲ್ಯ. Show all posts

Saturday, January 22, 2011

Horse Gram Sprouts Bassaru-ಮೊಳಕೆ ಹುರುಳಿಕಾಳು-ದಂಟುಸೊಪ್ಪಿನ ಬಸ್ಸಾರು ಮತ್ತು ಪಲ್ಯ:



ಮೊಳಕೆ ಹುರುಳಿಕಾಳು-ದಂಟುಸೊಪ್ಪಿನ ಬಸ್ಸಾರು ಮತ್ತು ಸೊಪ್ಪಿನ ಪಲ್ಯ:


ಸಾರಿಗೆ ಬೇಕಾಗುವ ಸಾಮಾಗ್ರಿಗಳು:

ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತುಂಬರಿಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ

ತಯಾರಿಸುವವಿಧಾನ:

ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.
ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ,ಕಾಳು ಬೇಯಲು ಬಿಡಿ.ಹುರುಳೀಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ವಿಷ್ಹಲ್ ಬರುವಷ್ಟು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಹುರುಳಿಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು,ಬೇಯಿಸಿದ ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.

ಸಾರಿಗೆ ರುಬ್ಬಿಕೊಳ್ಳಲು:

ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು,ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳುಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.

ಸಾರಿನ ಒಗ್ಗರಣೆಗೆ-

ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು.

ಈಗ ಸೊಪ್ಪಿನ ಪಲ್ಯಕ್ಕೆ:

ಒಗ್ಗರಣೆಗೆ -


ಎಣ್ಣೆಹಾಕಿ, ಸಾಸಿವೆ, ಕರಿಬೇವು, ಜಜ್ಜಿದ ಬೆಳ್ಳುಳ್ಳಿ, ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಹಾಕಿ, ಅದನ್ನು ಹುರಿದುಕೊಂಡ ನಂತರ ಸೊಪ್ಪುಕಾಳಿನ ಮಿಶ್ರಣವನ್ನು ಹಾಕಿ, ಚೆನ್ನಾಗಿ ಬೆರೆಸಿ. ಉಪ್ಪನ್ನು ಬೇಯುವಾಗ ಹಾಕಿರುವುದರಿಂದ ಈಗ ಬೇಕೆನಿಸಿದರೆ ಹಾಕಿಕೊಳ್ಳಿ. ಕೊನೆಯಲ್ಲಿ ತೆಂಗಿನತುರಿ ಹಾಕಿ ಚೆನ್ನಾಗಿ ಬೆರೆಸಿ. ಹುರುಳಿಕಾಳುಸೊಪ್ಪಿನ ಪಲ್ಯ ತಯಾರು.

ಈ ಸಾರಿನ ಬಣ್ಣ ಸ್ವಲ್ಪ ಕಂದು ಬಣ್ಣವಿರುತ್ತದೆ.ಹುರುಳಿಕಾಳು ಮತ್ತು ದಂಟು ಎರಡು ಸೇರಿರುವ ಈ ಬಸ್ಸಾರು ಚೆನ್ನಾಗಿರುತ್ತದೆ.
* ಹುಣಸೆಹಣ್ಣನ್ನು ಹಾಕಿದರೆ ರುಬ್ಬುವಾಗ ಹಾಕಿ ಅಥವಾ ಹುಣಸೆರಸವನ್ನು ಉಪಯೋಗಿಸುವುದಾದರೆ ಸಾರು ಕುದಿಯುವಾಗ ಹಾಕಿ,ಕುದಿಸಿ,ಇಳಿಸಿ.
* ಸಾರಿಗೆ ಒಂದು ಸ್ವಲ್ಪ ಬೆಲ್ಲವನ್ನು ಹಾಕಬಹುದು.(ಇಷ್ಟಪಡುವವರು)
*ಸೊಪ್ಪಿನ ಪಲ್ಯಕ್ಕೆ ಕಾಯಿತುರಿ ಬೇಕಾದರೆ ಹಾಕಬಹುದು,ರುಚಿ ಹೆಚ್ಚು ಕೊಡುತ್ತದೆ. ಇಲ್ಲ ಅಂದರೆ ಕೊಕೊನಟ್ ಪೌಡರ್ ಕೂಡ ಹಾಕಬಹುದು.
*ಬಸ್ಸಾರಿಗೆ ಕೊತ್ತುಂಬರಿ ಸೊಪ್ಪು,ಬೆಳ್ಳುಳ್ಳಿ ಹೆಚ್ಚಿಗೆ ಇದ್ದರೆ ರುಚಿ ಜಾಸ್ತಿ. ಉಪ್ಪು ಮತ್ತು ಕಾರವೆಲ್ಲಾ ನಿಮ್ಮ ರುಚಿಗೆ ತಕ್ಕಂತೆ ಹಾಕಿ ತಯಾರಿಸಿ.
*ಬಸ್ಸಾರನ್ನು ರಾಗಿಮುದ್ದೆ ಮತ್ತು ಬಿಳಿ ಅನ್ನದೊಂದಿಗೆ ಸರ್ವ್ ಮಾಡಿ. ಬಸ್ಸಾರು ತಯಾರಿಸಿದ ದಿನಕ್ಕಿಂತ ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಈ ಸಾರು ಕುದಿಸಿದಷ್ಟು ರುಚಿ ಹೆಚ್ಚು.
*ಈ ರೀತಿಯ ಬಸ್ಸಾರು, ಪಲ್ಯ ಮತ್ತು ರಾಗಿಮುದ್ದೆ ನಮ್ಮ ಕರ್ನಾಟಕದಲ್ಲಿ ತುಂಬಾ ಮನೆಮಾತಾಗಿದೆ. ರೋಗಕ್ಕೆ ರಾಮಬಾಣ ರಾಗಿಮುದ್ದೆ.
*ಹುರುಳಿಕಾಳುಗಳನ್ನು ಚೆನ್ನಾಗಿ ತೊಳೆದು,ಏಳೆಂಟು ಗಂಟೆ ನೆನೆಸಿ. ನೀರು ಸೋಸಿ,ಕಾಳುಗಳನ್ನು ಬಟ್ಟೆ ಕಟ್ಟಿಡಿ ಅಥವಾ ಕೊಲಾಂಡರ್ (ಸ್ಟ್ರೈನರ್)ನಲ್ಲಿ ಹಾಕಿ ಗಟ್ಟಿಯಾಗಿ ಮುಚ್ಚಿಡಿ. ಮಾರನೇದಿನ ಸ್ವಲ್ಪ ಮತ್ತು ಮತ್ತೊಂದು ದಿನ ಬಿಟ್ಟರೆ ತುಂಬಾ ಚೆನ್ನಾಗಿ, ಉದ್ದವಾಗಿ ಮೊಳಕೆ ಬಂದಿರುತ್ತವೆ. ಮೊಳಕೆ ಕಾಳುಗಳು ತುಂಬಾ ಒಳ್ಳೆಯದು.
*ಸೊಪ್ಪನ್ನು ಎಷ್ಟು ಬೇಕೋ ಅಷ್ಟು ಹಾಕಿ, ಸೊಪ್ಪು ಎಷ್ಟಾಕಿದರೂ ಬೆಂದ ನಂತರ ಸ್ವಲ್ಪವೇ ಆಗುತ್ತದೆ. ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Monday, January 19, 2009

Hesarukaalina kurma-ಹೆಸರುಕಾಳು ತಾಳು:

ಹೆಸರುಕಾಳು ತಾಳು:

ಸಾಮಾಗ್ರಿಗಳು:
ಹೆಸರುಕಾಳು - ಒಂದು ಬಟ್ಟಲು
ವಿವಿಧರೀತಿಯ ಹೆಚ್ಚಿದ ತರಕಾರಿಗಳು-
ಕ್ಯಾರೆಟ್, ಆಲೂಗೆಡ್ಡೆ,
ನವಿಲುಕೋಸು,
ಹೂಕೋಸು, ಸೋರೆಕಾಯಿ,
ಟಮೋಟೋ
ಈರುಳ್ಳಿ ಸಣ್ಣಗೆ ಹೆಚ್ಚಿದ್ದು
ಎಣ್ಣೆ, ಸಾಸಿವೆ, ಕರಿಬೇವು
ಅರಿಶಿಣದ ಪುಡಿ
ಧನಿಯಾಪುಡಿ
ಕಾರದಪುಡಿ
ಸಾಂಬಾರ್ ಪುಡಿ (ಸಾರಿನ ಪುಡಿ)
ಉಪ್ಪು
ತೆಂಗಿನತುರಿ ಬೇಕಾದರೆ
ಕೊತ್ತುಂಬರಿಸೊಪ್ಪು

ವಿಧಾನ:

ಹೆಸರುಕಾಳನ್ನು,ಒಂದು ಚಮಚ ಎಣ್ಣೆ,ಸ್ವಲ್ಪ ಅರಿಶಿಣ ಹಾಕಿ,ಸ್ವಲ್ಪ ಗಟ್ಟಿಯಾಗಿಯೇ ಬೇಯಿಸಿಕೊಂಡು(ಹೆಸರುಕಾಳನ್ನು ತುಂಬಾ ಮೆತ್ತಗೆ ಅಥವಾ ನುಣ್ಣಗೆ ಬೇಯಿಸ ಬೇಡಿ) ಅದಕ್ಕೆ ಹೆಚ್ಚಿದ ತರಕಾರಿಗಳು,ಸಾರಿನಪುಡಿ,ಕಾರದಪುಡಿ,ಧನಿಯಾಪುಡಿ ಮತ್ತು ಉಪ್ಪು ಚೆನ್ನಾಗಿ ಬೆರೆಸಿ,ತರಕಾರಿಗಳು ಬೇಯುವವರೆಗೂ ಬೇಯಿಸಿಕೊಳ್ಳಿ.ಈ ಸಮಯದಲ್ಲಿ ಕಾಳು ಸರಿಯಾಗಿ ಬೇಯುತ್ತದೆ. ಕೊನೆಯಲ್ಲಿ ತೆಂಗಿನತುರಿ ಮತ್ತು ಕೊತ್ತುಂಬರಿ ಸೊಪ್ಪು ಮತ್ತು ಒಗ್ಗರಣೆಯನ್ನು ಹಾಕಿ, ಚೆನ್ನಾಗಿ ಬೆರೆಸಿ,ಒಂದೆರಡು ನಿಮಿಷ ಕುದಿಸಿ,ಇಳಿಸಿ. ಈ ಕಾಳು ಅಥವಾ ತಾಳನ್ನು ಹಬ್ಬದಲ್ಲಿ ವಿಶೇಷವಾಗಿ ತಯಾರಿಸಲಾಗುತ್ತದೆ.ಇದನ್ನು ಊಟಕ್ಕೆ ಅಥವಾ ಚಪಾತಿ ಅಥವಾ ಪೂರಿಯೊಂದಿಗೆ ತಿನ್ನಲು ಕೊಡಿ.
* ಒಗ್ಗರಣೆ - ಎಣ್ಣೆಯನ್ನು ಬಿಸಿಮಾಡಿ, ಸಾಸಿವೆ, ಕರಿಬೇವು ಮತ್ತು ಈರುಳ್ಳಿಯನ್ನು ಹಾಕಿ ಒಂದೆರಡು ನಿಮಿಷ ಹದವಾಗಿ ಹುರಿದು ಅದನ್ನು ಬೆರೆಸಿ.
*ಕುಕ್ಕರ್ ನಲ್ಲಿ ತಯಾರಿಸುವುದಾದರೆ ಮೊದಲು ಸ್ವಲ್ಪ ಕಾಳನ್ನು ಬೇಯಿಸಿ,ಒಗ್ಗರಣೆ ಮತ್ತು ಎಲ್ಲವನ್ನೂ ಹಾಕಿ ಮುಚ್ಚಿಟ್ಟು ಒಂದು ಕೂಗು ಕೂಗಿಸಿ ಇಳಿಸಿ.

Saturday, June 14, 2008

CabbageBeansBassaaru-ಕೋಸು-ಬೀನ್ಸ್ ಬಸ್ಸಾರು ಮತ್ತು ಪಲ್ಯ:

ಕೋಸು-ಬೀನ್ಸ್ ಬಸ್ಸಾರು ಮತ್ತು ಪಲ್ಯ:
ಸಾರಿಗೆ ಬೇಕಾಗುವ ಸಾಮಾಗ್ರಿಗಳು:

ತೊಗರಿಬೇಳೆ -ಎರಡು ಕಪ್
ಹುರುಳಿಕಾಯಿ/ಬೀನ್ಸ್
ಎಲೆಕೋಸು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಸಿನದಪುಡಿ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕಾಯಿತುರಿ/ಕೊಬ್ರಿತುರಿ ಸ್ವಲ್ಪ-ಎರಡು ಚಮಚ
ಕೊತ್ತುಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:

ಮೊದಲು ಹುರುಳಿಕಾಯಿ ಮತ್ತು ಎಲೆಕೋಸನ್ನು ಸಣ್ಣಗೆ ಹೆಚ್ಚಿಕೊಳ್ಳಿ.
ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರೆಬೇಳೆಯನ್ನು, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ,ಬೇಳೆ ಬೇಯಲು ಬಿಡಿ.ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ತರಕಾರಿ ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ,ತರಕಾರಿ ಬೇಯುವವರೆಗೂ ಬೇಯಿಸಿ,ಬೇಳೆ ಕರಗದಂತೆ ಬೇಯಿಸಿಕೊಳ್ಳಿ.ತುಂಬಾ ನುಣ್ಣಗೆ ಬೇಯಿಸಬೇಡಿ,ನಂತರ ಬೇಳೆ ಮತ್ತು ತರಕಾರಿ ಮಿಶ್ರಣವನ್ನು ಜಾಲರಿಯಲ್ಲಿ (ಕೊಲಾಂಡರ್/ಸ್ಟ್ರೈನರ್) ಸೋಸಿಕೊಂಡು,ಸಾರಿನ ಕಟ್ಟು ಮತ್ತು ತರಕಾರಿ ಬೇಳೆ ಮಿಶ್ರಣವನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು:
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು,ಅದಕ್ಕೆ ಒಂದೆರಡು ಚಮಚ ಬೇಯಿಸಿದ ಬೇಳೆ ಮತ್ತು ತರಕಾರಿ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ/ಕೊಬ್ರಿ,ಜೀರಿಗೆ,ಅಚ್ಚಖಾರದಪುಡಿ,ಮೆಣಸು,ಸಾರಿನಪುಡಿ,ಹುಣಸೆಹಣ್ಣು,ಕೊತ್ತುಂಬರಿಸೊಪ್ಪು ಎಲ್ಲವನ್ನೂ ಸೇರಿಸಿ,ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ-
ಒಂದೆರಡು ಚಮಚ ಎಣ್ಣೆ ಹಾಕಿ,ಸಾಸಿವೆ ಮತ್ತು ಜೀರಿಗೆ ಹಾಕಿ,ಕರಿಬೇವು,ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ,ಬಸಿದಿಟ್ಟುಕೊಂಡ ಸಾರಿನಕಟ್ಟನ್ನು ಹಾಕಿ,ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ.'ಬಸ್ಸಾರು' ತಯಾರು.
ಈಗ ಬೇಳೆ-ತರಕಾರಿ ಪಲ್ಯಕ್ಕೆ:
ಒಗ್ಗರಣೆಗೆ -
ಎಣ್ಣೆಹಾಕಿ,ಸಾಸಿವೆ,ಕರಿಬೇವು,ಜಜ್ಜಿದ ಬೆಳ್ಳುಳ್ಳಿ,ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಹಾಕಿ,ಚಿಟಿಕೆ ಉಪ್ಪನ್ನು ಹಾಕಿ. ಅದನ್ನು ಹುರಿದುಕೊಂಡ ನಂತರ ತರಕಾರಿ-ಬೇಳೆ ಮಿಶ್ರಣವನ್ನು ಹಾಕಿ,ಚೆನ್ನಾಗಿ ಬೆರೆಸಿ. ಉಪ್ಪನ್ನು ಬೇಯುವಾಗ ಹಾಕಿರುವುದರಿಂದ ಈಗ ಬೇಕೆನಿಸಿದರೆ ಹಾಕಿಕೊಳ್ಳಿ. ಕೊನೆಯಲ್ಲಿ ತೆಂಗಿನತುರಿ ಹಾಕಿ ಚೆನ್ನಾಗಿ ಬೆರೆಸಿ. 'ಪಲ್ಯ' ತಯಾರು.
* ಹುಣಸೆಹಣ್ಣನ್ನು ಹಾಕಿದರೆ ರುಬ್ಬುವಾಗ ಹಾಕಿ ಅಥವಾ ಹುಣಸೆರಸವನ್ನು ಉಪಯೋಗಿಸುವುದಾದರೆ ಸಾರು ಕುದಿಯುವಾಗ ಹಾಕಿ,ಕುದಿಸಿ,ಇಳಿಸಿ.
* ಸಾರಿಗೆ ಒಂದು ಸ್ವಲ್ಪ ಬೆಲ್ಲವನ್ನು ಹಾಕಬಹುದು.(ಇಷ್ಟಪಡುವವರು)
* ಪಲ್ಯಕ್ಕೆ ಕಾಯಿತುರಿ ಬೇಕಾದರೆ ಹಾಕಬಹುದು,ರುಚಿ ಹೆಚ್ಚು ಕೊಡುತ್ತದೆ. ಇಲ್ಲ ಅಂದರೆ ಕೊಕೊನಟ್ ಪೌಡರ್ ಕೂಡ ಹಾಕಬಹುದು.
* ಬಸ್ಸಾರಿಗೆ ಕೊತ್ತುಂಬರಿ ಸೊಪ್ಪು,ಬೆಳ್ಳುಳ್ಳಿ ಹೆಚ್ಚಿಗೆ ಇದ್ದರೆ ರುಚಿ ಜಾಸ್ತಿ. ಉಪ್ಪು ಮತ್ತು ಕಾರವೆಲ್ಲಾ ನಿಮ್ಮ ರುಚಿಗೆ ತಕ್ಕಂತೆ ಹಾಕಿ ತಯಾರಿಸಿ.
* ಬಸ್ಸಾರನ್ನು ರಾಗಿಮುದ್ದೆ ಮತ್ತು ಬಿಳಿ ಅನ್ನದೊಂದಿಗೆ ಸರ್ವ್ ಮಾಡಿ. ಬಸ್ಸಾರು ತಯಾರಿಸಿದ ದಿನಕ್ಕಿಂತ ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಈ ಸಾರು ಕುದಿಸಿದಷ್ಟು ರುಚಿ ಹೆಚ್ಚು.
* ಜಾಲರಿ ಎಂದರೆ colander / strainer ಇದನ್ನು ಉಪಯೋಗಿಸಿ ಕಟ್ಟು ಬಸಿದುಕೊಳ್ಳಿ.
* ಬಸ್ಸಾರು ನಮ್ಮ ಕರ್ನಾಟಕದಲ್ಲಿ ತುಂಬಾ ಮನೆಮಾತಾಗಿದೆ. ಬಸ್ಸಾರುಗಳಿಗೆ ಸಾಮಾನ್ಯವಾಗಿ ರಾಗಿಮುದ್ದೆ ಇದ್ದೇಇರುತ್ತದೆ.

Sunday, April 27, 2008

Greengram Bassaru-ಹೆಸರುಕಾಳು ತರಕಾರಿ ಬಸ್ಸಾರು ಮತ್ತು ಪಲ್ಯ



ಹೆಸರುಕಾಳು ತರಕಾರಿ ಬಸ್ಸಾರು ಮತ್ತು ಪಲ್ಯ

ಸಾರಿಗೆ ಬೇಕಾಗುವ ಸಾಮಾಗ್ರಿಗಳು:


ಹೆಸರುಕಾಳು -ಎರಡು ಕಪ್
ಹುರುಳಿಕಾಯಿ/ಬೀನ್ಸ್
ಎಲೆಕೋಸು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಕಾಳು -ಐದಾರು
ಅರಿಸಿನದಪುಡಿ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕಾಯಿತುರಿ/ಕೊಬ್ರಿತುರಿ ಸ್ವಲ್ಪ-ಎರಡು ಚಮಚ
ಹುಣಸೆಹಣ್ಣು ಅಥವಾ ಹುಣಸೆರಸ
ಕೊತ್ತುಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ

ತಯಾರಿಸುವವಿಧಾನ:
ಮೊದಲು ಹುರುಳಿಕಾಯಿ ಮತ್ತು ಎಲೆಕೋಸನ್ನು ಸಣ್ಣಗೆ ಹೆಚ್ಚಿಕೊಳ್ಳಿ.
ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ಹೆಸರುಕಾಳು, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ,ಕಾಳನ್ನು ಬೇಯಿಸಿ, ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ತರಕಾರಿ ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ,ತರಕಾರಿ ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ.ತುಂಬಾ ನುಣ್ಣಗೆ ಬೇಯಿಸಬೇಡಿ, ನಂತರ ಕಾಳು ಮತ್ತು ತರಕಾರಿ ಮಿಶ್ರಣವನ್ನು ಜಾಲರಿಯಲ್ಲಿ (ಕೊಲಾಂಡರ್/ಸ್ಟ್ರೈನರ್) ಸೋಸಿಕೊಂಡು,ಸಾರಿನ ಕಟ್ಟು ಮತ್ತು ತರಕಾರಿ ಕಾಳು ಮಿಶ್ರಣವನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.

ಸಾರಿಗೆ ರುಬ್ಬಿಕೊಳ್ಳಲು:
ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು,ಅದಕ್ಕೆಎರಡು ಚಮಚ ಬೇಯಿಸಿ ಬಸಿದ ಕಾಳು-ತರಕಾರಿ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.

ಸಾರಿನ ಒಗ್ಗರಣೆಗೆ-
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಕಾಳುತರಕಾರಿ ಮಿಶ್ರಣದ ಸಾರಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.

ಈಗ ಕಾಳು-ತರಕಾರಿ ಪಲ್ಯಕ್ಕೆ:
ಒಗ್ಗರಣೆಗೆ -
ಎಣ್ಣೆಹಾಕಿ, ಸಾಸಿವೆ, ಕರಿಬೇವು, ಜಜ್ಜಿದ ಬೆಳ್ಳುಳ್ಳಿ, ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಹಾಕಿ,ಚಿಟಿಕೆ ಉಪ್ಪನ್ನು ಹಾಕಿ. ಅದನ್ನು ಹುರಿದುಕೊಂಡ ನಂತರ ತರಕಾರಿ-ಕಾಳು ಮಿಶ್ರಣವನ್ನು ಹಾಕಿ, ಚೆನ್ನಾಗಿ ಬೆರೆಸಿ. ಉಪ್ಪನ್ನು ಬೇಯುವಾಗ ಹಾಕಿರುವುದರಿಂದ ಈಗ ಬೇಕೆನಿಸಿದರೆ ಹಾಕಿಕೊಳ್ಳಿ. ಕೊನೆಯಲ್ಲಿ ತೆಂಗಿನತುರಿ ಹಾಕಿ ಚೆನ್ನಾಗಿ ಬೆರೆಸಿ. ಪಲ್ಯ ತಯಾರು.

* ಹುಣಸೇಹಣ್ಣನ್ನು ಹಾಕಿದರೆ ರುಬ್ಬುವಾಗ ಹಾಕಿ ಅಥವಾ ಹುಣಸೇರಸವನ್ನು ಉಪಯೋಗಿಸುವುದಾದರೆ ಸಾರು ಕುದಿಯುವಾಗ ಹಾಕಿ, ಕುದಿಸಿ, ಇಳಿಸಿ.
* ಸಾರಿಗೆ ಒಂದು ಸ್ವಲ್ಪ ಬೆಲ್ಲವನ್ನು ಹಾಕಬಹುದು.(ಇಷ್ಟಪಡುವವರು)
* ಪಲ್ಯಕ್ಕೆ ಕಾಯಿತುರಿ ಬೇಕಾದರೆ ಹಾಕಬಹುದು, ರುಚಿ ಹೆಚ್ಚು ಕೊಡುತ್ತದೆ. ಇಲ್ಲ ಅಂದರೆ ಕೊಕೊನಟ್ ಪೌಡರ್ ಕೂಡ ಹಾಕಬಹುದು.
* ಬಸ್ಸಾರಿಗೆ ಕೊತ್ತುಂಬರಿ ಸೊಪ್ಪು, ಬೆಳ್ಳುಳ್ಳಿ ಹೆಚ್ಚಿಗೆ ಇದ್ದರೆ ರುಚಿ ಜಾಸ್ತಿ. ಉಪ್ಪು ಮತ್ತು ಕಾರವೆಲ್ಲಾ ನಿಮ್ಮ ರುಚಿಗೆ ತಕ್ಕಂತೆ ಹಾಕಿ ತಯಾರಿಸಿ.
* ಬಸ್ಸಾರನ್ನು ರಾಗಿಮುದ್ದೆ ಮತ್ತು ಬಿಳಿ ಅನ್ನದೊಂದಿಗೆ ಸರ್ವ್ ಮಾಡಿ. ಬಸ್ಸಾರು ತಯಾರಿಸಿದ ದಿನಕ್ಕಿಂತ ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಈ ಸಾರು ಕುದಿಸಿದಷ್ಟು ರುಚಿ ಹೆಚ್ಚು.
* ಜಾಲರಿ ಎಂದರೆ colander / strainer ಇದನ್ನು ಉಪಯೋಗಿಸಿ ಕಟ್ಟು ಬಸಿದುಕೊಳ್ಳಿ.
* ಬಸ್ಸಾರು ನಮ್ಮ ಕರ್ನಾಟಕದಲ್ಲಿ ತುಂಬಾ ಮನೆಮಾತಾಗಿದೆ. ಬಸ್ಸಾರುಗಳಿಗೆ ಸಾಮಾನ್ಯವಾಗಿ ರಾಗಿಮುದ್ದೆ ಇದ್ದೇಇರುತ್ತದೆ.

Saturday, March 1, 2008

Mudde / RaagiMudde/Finger Millet ball - ರಾಗಿಮುದ್ದೆ

ರಾಗಿಮುದ್ದೆ :





ರಾಗಿ ಮುದ್ದೆ:

ಬೇಕಾಗುವ ಸಾಮಗ್ರಿಗಳು:

ರಾಗಿಹಿಟ್ಟು - ಒಂದು ಬಟ್ಟಲು
ನೀರು - ಎರಡು-ಮೂರು ಬಟ್ಟಲು
ಚಿಟಿಕೆ ಉಪ್ಪು

ತಯಾರಿಸುವ ವಿಧಾನ:

ಮೊದಲು ಸ್ವಲ್ಪ ಆಳ ಮತ್ತು ಅಗಲವಾಗಿರುವ ಪಾತ್ರೆಯಲ್ಲಿ ಅಳತೆ ನೀರನ್ನು ಮತ್ತು ಉಪ್ಪು ಹಾಕಿ ಅದು ಚೆನ್ನಾಗಿ ಕುದಿಯಲು ಬಿಡಿ. ನಂತರ ನಿಧಾನವಾಗಿ ರಾಗಿಹಿಟ್ಟನ್ನು ನೀರಿನ ಮಧ್ಯ ಭಾಗಕ್ಕೆ ಬರುವಂತೆ ಹಾಗೆ ಒಟ್ಟಿಗೆ ಹಾಕಿ, ಹಿಟ್ಟನ್ನು ಮತ್ತೆ ಮುಟ್ಟದೆ ಅದು ಚೆನ್ನಾಗಿ ಹತ್ತರಿಂದ ಹದಿನೈದು ನಿಮಿಷ ಬೇಯಲು ಬಿಟ್ಟು. ಅದು ಬೆಂದಿದೆ ಎನಿಸಿದ ತಕ್ಷಣ ಒಂದು ಸೌಟ್ ಅಥವಾ ಮರದ ಕೋಲಿನಿಂದ ಹಿಟ್ಟಿನ ಮಧ್ಯದಿಂದ ಹಾಗೇ ಒಂದೇಸಾರಿ ಎಲ್ಲಾ ಹಿಟ್ಟನ್ನು ಚೆನ್ನಾಗಿ ಕೈ ಆಡಿಸಿ. ಪೂರ್ತಿ ಹಿಟ್ಟು ಮತ್ತು ನೀರನ್ನು ಸರಿಯಾಗಿ ಬೆರೆಸಿ, ಗಂಟಿಲ್ಲದಂತೆ ಬೆರೆಸಿ. ಸ್ವಲ್ಪ ಗಟ್ಟಿ ಎನಿಸಿದರೆ ಮತ್ತೆ ಸ್ವಲ್ಪ ನೀರು ಹಾಕಿಕೊಂಡು ಬೆರೆಸಿ. ನಂತರ ಬೆರೆಸಿದ ಪೂರ್ತಿ ರಾಗಿಹಿಟ್ಟನ್ನು ತಟ್ಟೆ ಅಥವಾ ಚಾಪಿಂಗ್ ಬೋರ್ಡ್ ಅಥವಾ ಮರದ ಮಣೆ, ಮೇಲೆ ಹಾಕಿಕೊಂಡು, ಸ್ವಲ್ಪ ಲಘುವಾಗಿ ನಾದಿ ನಿಮಗೆ ಎಷ್ಟು ಬೇಕೋ ಅಷ್ಟು ಗಾತ್ರದ ಉಂಡೆಯನ್ನು ತಯಾರಿಸಿಕೊಳ್ಳಿ. ಕೈಗೆ ಸ್ವಲ್ಪ ತುಪ್ಪ ಮತ್ತು ನೀರನ್ನು ಸವರಿಕೊಂಡು ನಾದಿ. ಹೀಗೆ ತಯಾರಿಸಿದಾಗ ರಾಗಿಮುದ್ದೆ ತಯಾರಾಗುತ್ತದೆ. ಈ ರಾಗಿಮುದ್ದೆಯನ್ನು ಸೊಪ್ಪಿನ ಬಸ್ಸಾರು ಅಥವ ಮಸಾಲೆಸಾರು ಅಥವ ನಾನ್ ವೆಜ್ ಸಾರುಗಳೊಂದಿಗೆ ಸರ್ವ್ ಮಾಡಿ. ನಮ್ಮ ಕರ್ನಾಟಕದಲ್ಲಿ ರಾಗಿಮುದ್ದೆ ಬಸ್ಸಾರು ತುಂಬಾ ಪ್ರಸಿಧ್ಧವಾಗಿದೆ.ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವುದು ಮತ್ತು ರೋಗಗಳಿಗೆ ಮದ್ದಾಗಿರುವುದು ಈ ರಾಗಿಮುದ್ದೆ.

*ಕೆಲವರು ಮೊದಲೆ ನೀರಿಗೆ ಸ್ವಲ್ಪವೇ ಅಂದರೆ ಒಂದೆರಡು ಚಮಚ ರಾಗಿಹಿಟ್ಟನ್ನು ಕಲಸಿ,ಒಲೆಯ ಮೇಲೆ ಇಟ್ಟು ಅದನ್ನು ತಿರುಗಿಸುತ್ತಿದ್ದು,ನೀರು ಕುದಿ ಬಂದ ನಂತರ ಉಳಿದ ಎಲ್ಲಾ ಹಿಟ್ಟನ್ನು ಒಮ್ಮೆಲೆ ಹಾಕಿ,ಬೇಯಿಸಿ,ನಂತರ ಬೆರೆಸುತ್ತಾರೆ.ಹಾಗೂ ತಯಾರಿಸಬಹುದು.

ರಾಗಿಮುದ್ದೆ ಯಾರಿಸುವ ವಿಧಾನವನ್ನು ರಾಗಿಮುದ್ದೆ ಲೇಬಲ್ ನಲ್ಲಿ ನೋಡಬಹುದು. ಇದು ಬಸ್ಸಾರು ಮತ್ತು ಮೊಳಕೆ ಕಾಳುಗಳ ಸಾರಿನೊಂದಿಗೆ ತುಂಬಾ ಚೆನ್ನಾಗಿರುತ್ತದೆ. ಇದು ಆರೋಗ್ಯಕ್ಕೆ ಉತ್ತಮವಾದ ಆಹಾರ.ಎಲ್ಲರು ತಿನ್ನಬಹುದಾದಂತ ಸ್ವಾದಿಷ್ಟವಾದ ಅಡುಗೆ.

Friday, December 21, 2007

Bassaru /ಸೊಪ್ಪಿನ ಬಸ್ಸಾರು ಮತ್ತು ಸೊಪ್ಪಿನ ಪಲ್ಯ


ಬಸ್ಸಾರು ಮತ್ತು ಸೊಪ್ಪಿನ ಪಲ್ಯ:

ಸಾರಿಗೆ ಬೇಕಾಗುವ ಸಾಮಾಗ್ರಿಗಳು:

ತೊಗರಿಬೇಳೆ - ಒಂದು ಕಪ್
ಸಬ್ಬಸ್ಸಿಗೆ ಸೊಪ್ಪು/ಬೆರೆಕೆಸೊಪ್ಪು/ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತುಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ.ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರೆಬೇಳೆಯನ್ನು, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ,ಬೇಳೆ ಬೇಯಲು ಬಿಡಿ.ಬೇಳೆಯನ್ನು ತುಂಬಾ ನುಣ್ಣಗೆ ಬೇಯಿಸಬೇಡಿ, ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ,ಸೊಪ್ಪು ಬೇಯುವವರೆಗೂ ಬೇಯಿಸಿ, ಬೇಳೆ ಕರಗದಂತೆ ಬೇಯಿಸಿಕೊಳ್ಳಿ. ನಂತರ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು,ಸೊಪ್ಪಿನ ಕಟ್ಟು ಮತ್ತು ಸೊಪ್ಪನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು:
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು,ಅದಕ್ಕೆ ಒಂದೆರಡು ಚಮಚ ಬೇಯಿಸಿದ ಬೇಳೆ ಮತ್ತು ಸೊಪ್ಪಿನ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತುಂಬರಿಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ-
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಬಸ್ಸಾರು ತಯಾರು.
ಈಗ ಸೊಪ್ಪಿನ ಪಲ್ಯಕ್ಕೆ:
ಒಗ್ಗರಣೆಗೆ -
ಎಣ್ಣೆಹಾಕಿ, ಸಾಸಿವೆ, ಕರಿಬೇವು, ಜಜ್ಜಿದ ಬೆಳ್ಳುಳ್ಳಿ, ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಹಾಕಿ, ಅದನ್ನು ಹುರಿದುಕೊಂಡ ನಂತರ ಸೊಪ್ಪುಬೇಳೆ ಮಿಶ್ರಣವನ್ನು ಹಾಕಿ, ಚೆನ್ನಾಗಿ ಬೆರೆಸಿ. ಉಪ್ಪನ್ನು ಬೇಯುವಾಗ ಹಾಕಿರುವುದರಿಂದ ಈಗ ಬೇಕೆನಿಸಿದರೆ ಹಾಕಿಕೊಳ್ಳಿ. ಕೊನೆಯಲ್ಲಿ ತೆಂಗಿನತುರಿ ಹಾಕಿ ಚೆನ್ನಾಗಿ ಬೆರೆಸಿ. ಸೊಪ್ಪಿನ ಪಲ್ಯ ತಯಾರು.
* ಹುಣಸೆಹಣ್ಣನ್ನು ಹಾಕಿದರೆ ರುಬ್ಬುವಾಗ ಹಾಕಿ ಅಥವಾ ಹುಣಸೆರಸವನ್ನು ಉಪಯೋಗಿಸುವುದಾದರೆ ಸಾರು ಕುದಿಯುವಾಗ ಹಾಕಿ, ಕುದಿಸಿ, ಇಳಿಸಿ.
* ಸಾರಿಗೆ ಒಂದು ಸ್ವಲ್ಪ ಬೆಲ್ಲವನ್ನು ಹಾಕಬಹುದು.(ಇಷ್ಟಪಡುವವರು)
*ಸೊಪ್ಪಿನ ಪಲ್ಯಕ್ಕೆ ಕಾಯಿತುರಿ ಬೇಕಾದರೆ ಹಾಕಬಹುದು, ರುಚಿ ಹೆಚ್ಚು ಕೊಡುತ್ತದೆ. ಇಲ್ಲ ಅಂದರೆ ಕೊಕೊನಟ್ ಪೌಡರ್ ಕೂಡ ಹಾಕಬಹುದು.
*ಬಸ್ಸಾರಿಗೆ ಕೊತ್ತುಂಬರಿ ಸೊಪ್ಪು, ಬೆಳ್ಳುಳ್ಳಿ ಹೆಚ್ಚಿಗೆ ಇದ್ದರೆ ರುಚಿ ಜಾಸ್ತಿ. ಉಪ್ಪು ಮತ್ತು ಕಾರವೆಲ್ಲಾ ನಿಮ್ಮ ರುಚಿಗೆ ತಕ್ಕಂತೆ ಹಾಕಿ ತಯಾರಿಸಿ.
*ಸೊಪ್ಪಿನಬಸ್ಸಾರನ್ನು ರಾಗಿಮುದ್ದೆ ಮತ್ತು ಬಿಳಿ ಅನ್ನದೊಂದಿಗೆ ಸರ್ವ್ ಮಾಡಿ. ಬಸ್ಸಾರು ತಯಾರಿಸಿದ ದಿನಕ್ಕಿಂತ ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಈ ಸಾರು ಕುದಿಸಿದಷ್ಟು ರುಚಿ ಹೆಚ್ಚು.
*ಈ ರೀತಿಯ ಸೊಪ್ಪಿನ ಬಸ್ಸಾರು, ಪಲ್ಯ ಮತ್ತು ರಾಗಿಮುದ್ದೆ ನಮ್ಮ ಕರ್ನಾಟಕದಲ್ಲಿ ತುಂಬಾ ಮನೆಮಾತಾಗಿದೆ. ರೋಗಕ್ಕೆ ರಾಮಬಾಣ ರಾಗಿಮುದ್ದೆ.

Popular Posts